ಶಿವಮೊಗ್ಗ:25-02-2025.
ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ, ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಗಳಿಗೆ ಗುಣ ಮಟ್ಟ ಇಲ್ಲದ ಊಟ ಸೇರಿದಂತೆ ಅನೇಕ ಸಮಸ್ಯೆ ಗಳು ಎದುರಾಗಿದ್ದು ಇದನ್ನೆಲ್ಲಾ ಬಗೆ ಹರಿಸಿ ಮತ್ತು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಖ್ಫ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಗೆ ವಿದ್ಯಾರ್ಥಿ ಗಳಿಂದ ಮನವಿ ಸಲ್ಲಿಸಲಾಯಿತು.
ಇಂದು ನಗರಕ್ಕೆ ಆಗಮಿಸಿದ ಸಚಿವರಿಗೆ ಭೇಟಿ ನೀಡಿದ ಹಾಸ್ಟೆಲ್ ನ ವಿದ್ಯಾರ್ಥಿಗಳು ಮುಸ್ಲಿಂ ಹಾಸ್ಟೆಲ್ ನಲ್ಲಿ ಪೌಷ್ಟಿಕಾಂಶವಿಲ್ಲದ ಆಹಾರ ವನ್ನು ನೀಡಲಾಗುತ್ತಿದೆ, ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳ ಕೊರತೆ, ಕುಡಿಯುವ ಸ್ವಚ್ಛ ನೀರಿನ ಸಮಸ್ಯೆ ಜೊತೆಗೆ ಶೌಚಾಲಯ ಮತ್ತು ಸ್ನಾನ ಗ್ರಹಗಳ ಸ್ವಚ್ಛತೆ ಮತ್ತು ನಿರ್ವಹಣೆ ವಿಚಾರವಾಗಿ ಸ್ಥೆಳೀಯ ವಖ್ಫ್ ಅಧಿಕಾರಿಗಳಿಗೆ ಮೌಖಿಕವಾಗಿ ಅನೇಕ ದೊರುಗಳನ್ನು ನೀಡಿದರೊ ಗಮನ ಹರಿಸದ ಅಧಿಕಾರಿಗಳ ನಮ್ಮ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ದೊರಿದರು.
ವಾರ್ಡನ್ ವರ್ತನೆ ಸರಿಯಿಲ್ಲ : ವಾರ್ಡನ್ ವರ್ತನೆ ಸರಿ ಇಲ್ಲ ವಿದ್ಯಾರ್ಥಿ ಗಳ ಸಮಸ್ಯ ಗಳ ಬಗ್ಗೆ ವಾರ್ಡನ್ ಸ್ಪಂದಿಸುವುದಿಲ್ಲ . ಹಣದ ಆಸೆಗೆ ವಿದ್ಯಾರ್ಥಿ ಅಲ್ಲದ ವ್ಯಕ್ತಿಗಳಿಗೆ ರೂಮ್ ಗಳನ್ನು ಬಾಡಿಗೆಗೆ ನೀಡಿ ಹಣ ತಮ್ಮ ಜೇಬಿಗೆ ಹಾಕಿಕೊಂಡು ಸಮುದಾಯಕ್ಕೆ, ಇಲಾಖೆಗೆ ಮೋಸ ಮಾಡುತ್ತಾರೆ. ಬೇಕಾ ಬಿಟ್ಟೀಯಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗುತ್ತೆ ಸರಿಯಾಗಿ ರಸೀದಿ ಗಳನ್ನು ನೀಡುವುದಿಲ್ಲ ಮೊದಲು ವಾರ್ಡನ್ ಬದಲಾವಣೆಯಾಗಬೇಕೆಂದು ಹೆಸರು ಹೇಳಲಿಚ್ಚಿಸಿದ ವಿದ್ಯಾರ್ಥಿ ಯೊಬ್ಬರು ತಿಳಿಸಿದರು.
ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಿದ ಸಚಿವರು ಆದಷ್ಟು ಬೇಗ ಎಲ್ಲಾ ಸಮಸ್ಯೆ ಗಳನ್ನು ಬಗೆ ಹರಿಸಿ ಕೊಡುವುದಾಗಿ ಭರವಸೆ ನೀಡಿದರು. ಎಂ ಎಲ್ ಸಿ ಬಲ್ಕಿಶ್ ಬಾನು, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿವುಲ್ಲಾ , ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಕುಮಾರ್ , ಯೋಗೇಶ್ ಸದ್ದು ಬೆಳ್ಳಿಗಾವಿ ಮತ್ತಿತರರು ಇದ್ದರು.
ದಶಕಗಳಿಂದ ಹೋರಾಟ ನಡೆಯುತ್ತಿದೆ. ವಕ್ಫ್ ಬೋರ್ಡ್ -ವಾರ್ಡನ್- ಕಮಿಟಿಯ ಸದಸ್ಯರಾದವರಿಗೆ. ನಾಚಿಕೆಯಾಗಬೆಕು.