Education
ಪುಸ್ತಕ ಮತ್ತು ಶಿಕ್ಷಣಕ್ಕೆ ಮಾತ್ರ ಬಡತನ ನಿರ್ಮೂಲನೆ ಮಾಡುವ ಶಕ್ತಿ ಇದೆ-ಪತ್ರಕರ್ತ ನವೀನ್ ಕುಮಾರ್ ಅಭಿಮತ…
ಶಿರಾಳಕೊಪ್ಪ:13/2/2026 ಪುಸ್ತಕ ಮತ್ತು ಶಿಕ್ಷಣಕ್ಕೆ ಮಾತ್ರ ಬಡತನ ನಿರ್ಮೂಲನೆ ಮಾಡುವಂತಹ ಶಕ್ತಿ ಇದೆ ಪ್ರತಿಯೊಬ್ಬರೂ ಶಿಕ್ಷಣವನ್ನು ಕಡ್ಡಾಯ ವಾಗಿ ಪಡೆಯುವುದರ ಮೂಲಕ ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ನೈತಿಕ ವಾಗಿ ಸದೃಢರಾಗಬೇಕೆಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ನವೀನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಮಠದ ಗದ್ದೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಡು ಬಡತನದಲ್ಲಿ ಹುಟ್ಟಿದರೂ ಶಿಕ್ಷಣ ಮತ್ತು ಪುಸ್ತಕಗಳ ಮೇಲಿನ ಅಚಲ ಪ್ರೀತಿಯಿಂದ ಡಾ….
ಭೋಗಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವದ ಸಂಭ್ರಮ: ಮಕ್ಕಳಿಂದ ಸಾಂಸ್ಕೃತಿಕ ವೈಭವ….
ಶಿರಾಳಕೊಪ್ಪ:11/02/2026 ಹತ್ತಿರದ ಭೋಗಿ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯ ಶಾಲಾ ವಾರ್ಷಿಕೋತ್ಸವ ಸೋಮವಾರ ನಡೆಯಿತು. ಅತೀ ಸಣ್ಣ ಗ್ರಾಮವಾದರೂ ಅಂದು ಅಲ್ಲಿ ಮಾತ್ರ ಹಬ್ಬದ ಸಡಗರ ಸಂಭ್ರಮ. ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಪುಟ್ಟ ಪುಟಾಣಿಗಳ ಪುಟಿವ ಕಾರಂಜಿ ಕಾರ್ಯಕ್ರಮದ ಆಯೋಜನೆ, ಶಾಲೆ ಮತ್ತು ಶಾಲಾ ಆವರಣದ ಅಲಂಕಾರ, ಬ್ರಹತ್ ಗಾತ್ರದ ವೇದಿಕೆ, ಗ್ರಾಮಸ್ಥರಿಂದ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿ ಗಳಿಗೆ ಮನಸಾರೆ ಸ್ವಾಗತ ಕೋರಿದ ಪರಿ ಬಹಳ ಆಕರ್ಷಿತವಾಗಿತ್ತು. ಇಡೀ…
ಬುದ್ಧಿವಂತರು ಬಡವರಾಗುವುದು ಏಕೆ?’– ಲೇಖಕ ನವೀನ್ ಕುಮಾರ್ ಎಂ ಅವರ ಚೊಚ್ಚಲ ಕೃತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಗೌರವ…
ಶಿಕಾರಿಪುರ/ಶಿರಾಳಕೊಪ್ಪ: 28/1/2026 ಶಿಕಾರಿಪುರದ ಲೇಖಕ ಹಾಗೂ ಪತ್ರಕರ್ತ ನವೀನ್ ಕುಮಾರ್ ಎಂ ಅವರು ಬರೆದಿರುವ “ಬುದ್ಧಿವಂತರು ಬಡವರಾಗುವುದು ಏಕೆ?” ಎಂಬ ಕನ್ನಡದ ಪ್ರಯೋಗಾತ್ಮಕ ಕೃತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಡಿಯಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗೆ ನೀಡುವ ಪ್ರೋತ್ಸಾಹ ಧನ (2025–26)ಕ್ಕೆ ಆಯ್ಕೆಯಾಗಿದೆ. ಈ ಕೃತಿ ಲೇಖಕರ ಮೊದಲ ಪುಸ್ತಕವಾಗಿದ್ದು, ಕನ್ನಡ ಸಾಹಿತ್ಯದಲ್ಲಿ ವಿರಳವಾದ ನ್ಯೂರೋ ಎಕನಾಮಿಕ್ಸ್ (Neuro Economics) ವಿಷಯವನ್ನು ಸರಳ ಭಾಷೆಯಲ್ಲಿ ಓದುಗರಿಗೆ ತಲುಪಿಸುವ ಉದ್ದೇಶ ಹೊಂದಿದೆ. ಹಣ ಮತ್ತು ಮಾನವ ಮನಸ್ಸಿನ ನಡುವಿನ…
ನಾಟಕಗಳು ಸಮಾಜದ ವಿವಿಧ ಸ್ತರದ ಜನರನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ-ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ್…
ಶಿಕಾರಿಪುರ:26/1/2026 ಇತ್ತೀಚಿನ ದಿನಗಳಲ್ಲಿ ಮನೋರಂಜನೆ ಎಂಬುವುದುದು ಪ್ರತಿ ಮನೆ ಮನೆಗೆ ಲಗ್ಗೆ ಇಟ್ಟಿದೆ. ಮನೆಯಲ್ಲೇ ಎಲ್ಲಾ ಮನೋರಂಜನೆ ಪಡೆಯುವಂತಹ ಈ ದಿನಗಳಲ್ಲಿ ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವ ಅವಕಾಶ ಗಳು ಕ್ಷೀಣಿಸುತ್ತಿದ್ದು ಜನಗಳಲ್ಲಿ ಸಂಕುಚಿತ ಮನೋಭಾವನೆ ಹೆಚ್ಚಾಗುತ್ತಿದೆ ಎಂದು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ ಡಿ ಸಾಗರ್ ತಿಳಿಸಿದರು. ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗುಡಿ ಸಾಂಸ್ಕೃತಿಕ ಕೇಂದ್ರ ಶಿಕಾರಿಪುರ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ “ನಮ್ಮೊಳಗೊಬ್ಬ ಗಾಂಧಿ” ಎಂಬ…
ಗುರು ಪರಂಪರೆ ಶಾಶ್ವತ :ಶಿರಹಟ್ಟಿ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳು…
ಶಿರಾಳಕೊಪ್ಪ :21/01/2026 ದೇಶದಲ್ಲಿ ಹಲವಾರು ರಾಜ ಪರಂಪರೆಗಳು ಆಳಿದರು-ಅಳಿದೂ ಹೋದರು. ಆದರೆ ಗುರು ಪರಂಪರೆಗಳು ಉಳಿದು ಬೆಳೆದುಕೊಂಡು ಬಂದಿವೆ. ಯಾವುದೇ ಕಾಲಕ್ಕೂ ಮಠಗಳಿಗೆ ಗುರು ಪರಂಪರೆಗಳಿಗೆ ಅಳಿವು ಎಂಬುದು ಇಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕೆಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠದ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ನುಡಿದರು. ಅವರು ಮಂಗಳವಾರ ಶಿಕಾರಿಪುರ ತಾಲೂಕ ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಪರಂಪರೆ ಜಾತ್ರೋತ್ಸವ,…
ತೊಗರ್ಸಿಯ ಡಿಸಿಸಿ ಬ್ಯಾಂಕ್ ನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ…
ಶಿರಾಳಕೊಪ್ಪ /ತೊಗರ್ಸಿ:21/01/2026 ಹತ್ತಿರದ ತೋಗರ್ಸಿ ಗ್ರಾಮದಲ್ಲಿ ದಿನಾಂಕ 20.01.2026 ಮಂಗಳವಾರ ರಂದು ಡಿಸಿಸಿ ಬ್ಯಾಂಕಿನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಸೆಂಟರ್ ಶಿಕಾರಿಪುರದ ಶ್ರೀ ಗುಡದಯ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಲ್ಲಾ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಆರ್ಥಿಕತೆಯಿಂದ ಮುಕ್ತರಾಗಿ ಸಹಜ ಜೀವನ ನಡೆಸಲು ಹಣವನ್ನು ಹೇಗೆ ಗಳಿಸಬೇಕು ಗಳಿಸಿದ ಹಣವನ್ನು ಹೇಗೆ ಉಳಿಸಬೇಕು ಉಳಿಸಿದ ಹಣವನ್ನು ಹೇಗೆ ಬಳಸಬೇಕು ಎಂಬ ಮಾಹಿತಿಯ ಜೊತೆಗೆ ಜೀವವಿಮೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಾಡಿಸುವುದಾಗಿ ಮಾಹಿತಿ…
ಶಿವಾಚಾರ್ಯ ಸ್ವಾಮೀಜಿಗಳ ಸದ್ಬೋಧನಾ ಪಾದಯಾತ್ರೆ: ಧಾರ್ಮಿಕ ಜಾಗೃತಿಗಾಗಿ ಸ್ವಾಮೀಜಿಗಳ ನಡಿಗೆ…
ಶಿರಾಳಕೊಪ್ಪ: 19/01/2026 ಧರ್ಮದ ಮೂಲ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ‘ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ’ ಹಾಗೂ ‘ಕಡೆನಂದಿಹಳ್ಳಿಯ ಶ್ರೀ ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮ‘ದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕಡೆನಂದಿಹಳ್ಳಿ ಗ್ರಾಮದಲ್ಲಿ ಅದ್ಧೂರಿ ‘ ಶಿವಾಚಾರ್ಯರ ಸದ್ಬೋಧನಾ ಪಾದಯಾತ್ರೆ’ ನಡೆಯಿತು. ಕಡೆನಂದಿಹಳ್ಳಿಯ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾದ ಈ ಪಾದಯಾತ್ರೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಾದಯಾತ್ರೆಯ ಉದ್ದಕ್ಕೂ ವಿವಿಧ ಜಿಲ್ಲೆಗಳ ಮಠಾಧೀಶರು ಮತ್ತು ನೂರಾರು ಭಕ್ತಾದಿಗಳು…
45000ಸಾವಿರಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗಿಗಳಾಗಿ ಮಾಡಿದ ಕೀರ್ತಿ ಆಳ್ವಾಸ್ ವಿದ್ಯಾ ಸಂಸ್ಥೆಗಿದೆ- ವಿವೇಕ್ ಆಳ್ವಾ…
ಶಿರಾಳಕೊಪ್ಪ:18/1/2026 ಆಳ್ವಾಸ್ ವಿದ್ಯಾ ಸಂಸ್ಥೆ ಕಳೆದ 18 ವರ್ಷದಿಂದ ಉದ್ಯೋಗ ಮೇಳಗಳನ್ನು ರಾಜ್ಯ ಹಾಗೂ ಅಂತರಾಜ್ಯ ಮಟ್ಟದಲ್ಲಿ ಆಯೋಜಿಸಿ 45,000ಕ್ಕೂ ಹೆಚ್ಚು ನಿರುದ್ಯೋಗಿ ಗಳನ್ನು ಉದ್ಯೋಗಗಳು ಲಭಿಸುವಂತೆ ಮಾಡಿದೆ ಎಂದು ಆಳ್ವಾಸ್ ವಿದ್ಯಾ ಸಂಸ್ಥೆ ಮೊಡಬಿದರೆಯ ವಿವೇಕ್ ಆಳ್ವಾ ಹೇಳಿದರು. ಪಟ್ಟಣದ ನೇರಲಗಿ ಸಮುದಾಯ ಭವನದಲ್ಲಿ ಶನಿವಾರ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಶಿಕಾರಿಪುರ ಹಾಗೂ ಆಳ್ವಾಸ್ ಚಿಕ್ಕನ ಪ್ರತಿಷ್ಠಾನ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಉದ್ಯೋಗ ಮೇಳದ ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಶಿಕಾರಿಪುರ ತಾಲ್ಲೂಕಿನ…
ಶಿರಾಳಕೊಪ್ಪದ ಹಳಿಯೂರು ಸರ್ಕಾರಿ ಉರ್ದು ಶಾಲೆಯಲ್ಲಿ ಕಲಿಕಾ ಹಬ್ಬ…
ಶಿರಾಳಕೊಪ್ಪ:14/1/2026 ಪಟ್ಟಣದ ಹಳಿಯೂರು ಪ್ರದೇಶದಲ್ಲಿರುವ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿರಾಳಕೊಪ್ಪ ಉರ್ದು 3 ಕ್ಲಸ್ಟರ್ ಮಟ್ಟದ ಶಾಲೆಗಳ ಮಕ್ಕಳ ಕಲಿಕಾ ಹಬ್ಬ (ಎಫ್ಎಲ್ಎನ್) ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪಟ್ಟಣದ ಉರ್ದು 3 ವಿಭಾಗದ ಕ್ಲಸ್ಟರ್ ಲೆವೆಲ್ ಅಧಿಕಾರಿ ನಾಸಿರ್ ಅಹ್ಮದ್ ‘ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲ್ಯ ಗಳನ್ನು ಬಲಪಡಿಸುವುದೇ ಎಫ್ಎಲ್ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.ಇಂತಹ ಕಲಿಕಾ ಹಬ್ಬಗಳು ಮಕ್ಕಳಲ್ಲಿ ಕಲಿಕೆಗೆ ಆಸಕ್ತಿ ಮೂಡಿಸಲು…
ಸರ್ಕಾರಗಳಿಗೆ ಎಚ್ಚರಿಸುವ ಶಕ್ತಿ ಪತ್ರಕರ್ತರಿಗಿದೆ- ಬಿ ವೈ ವಿಜಯೇಂದ್ರ…
ಶಿಕಾರಿಪುರ:3/1/2026 ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದು ಕರೆಯಲ್ಪಡುವ ಪತ್ರಿಕೋದ್ಯಮವು ಸರ್ಕಾರ ಮತ್ತು ವ್ಯವಸ್ಥೆಯನ್ನು ಎಚ್ಚರಿಸಿ ಸರಿದಾರಿಗೆ ತರುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ತಾಲ್ಲೂಕಿನ ಶಾಸಕ ಬಿ ವೈ ವಿಜಯೇಂದ್ರ ನುಡಿದರು. ಶನಿವಾರ ಶಿಕಾರಿಪುರ ತಾಲ್ಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ನೂತನ ಪಧಾಧಿ ಕಾರಿಗಳ ಪದ ಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವರ್ತಮಾನ ಕಾಲದಲ್ಲಿ ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ದೃಶ್ಯ ಮಾಧ್ಯಮಗಳ ಆರ್ಭಟದ ನಡುವೆ ಇವತ್ತಿಗೂ…

