Health
ಶಿವಾಚಾರ್ಯ ಸ್ವಾಮೀಜಿಗಳ ಸದ್ಬೋಧನಾ ಪಾದಯಾತ್ರೆ: ಧಾರ್ಮಿಕ ಜಾಗೃತಿಗಾಗಿ ಸ್ವಾಮೀಜಿಗಳ ನಡಿಗೆ…
ಶಿರಾಳಕೊಪ್ಪ: 19/01/2026 ಧರ್ಮದ ಮೂಲ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ‘ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ’ ಹಾಗೂ ‘ಕಡೆನಂದಿಹಳ್ಳಿಯ ಶ್ರೀ ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮ‘ದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕಡೆನಂದಿಹಳ್ಳಿ ಗ್ರಾಮದಲ್ಲಿ ಅದ್ಧೂರಿ ‘ ಶಿವಾಚಾರ್ಯರ ಸದ್ಬೋಧನಾ ಪಾದಯಾತ್ರೆ’ ನಡೆಯಿತು. ಕಡೆನಂದಿಹಳ್ಳಿಯ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾದ ಈ ಪಾದಯಾತ್ರೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಾದಯಾತ್ರೆಯ ಉದ್ದಕ್ಕೂ ವಿವಿಧ ಜಿಲ್ಲೆಗಳ ಮಠಾಧೀಶರು ಮತ್ತು ನೂರಾರು ಭಕ್ತಾದಿಗಳು…
ಡಿ19ಕ್ಕೆ ನಡೆಯಲಿದೆ ಬಜ್ಮೆ ಉಮ್ಮೀದ್ ಅದೀಬಿ ಶಿರಾಳಕೊಪ್ಪ ವತಿಯಿಂದ ಮೂರನೇ ಬಾರಿ ರಾಷ್ಟ್ರೀಯ ಕವಿ ಸಮ್ಮೇಳನ….
ಶಿರಾಳಕೊಪ್ಪ:13/12/2025 ಪಟ್ಟಣದ ಸಾಂಸ್ಕೃತಿಕ ವೇದಿಕೆ ಬಜ್ಮೆ ಉಮ್ಮೀದ್ ಅದೀಬಿ ವತಿಯಿಂದ ಪ್ರತಿ ವರ್ಷ ನಡೆಯುವ ಕವಿ ಸಮ್ಮೇಳನ ಇದೇ ಡಿಸೆಂಬರ್ 19 ರ ಶುಕ್ರವಾರ ರಾತ್ರಿ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷ ಮುಹಮ್ಮದ್ ಅಯೂಬ್ ಕೆ ಜಿ ಎನ್ ತಿಳಿಸಿದರು. ಊರಿನ ಮಧ್ಯ ಭಾಗದಲ್ಲಿರುವ ಹಜರತ್ ಟಿಪ್ಪು ಸುಲ್ತಾನ್ ಮ್ಯಾರೇಜ್ ಹಾಲ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕವಿ ಸಮ್ಮೇಳನದಲ್ಲಿ ದೇಶ ಹಾಗೂ ರಾಜ್ಯದ ವಿವಿಧ ಕಡೆಗಳಿಂದ ಪ್ರಖ್ಯಾತ ಕವಿ ಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಮಕ್ಕಳಿಗೆ…
ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಂದ ಮಧುಮೇಹ ಜಾಗೃತಿ…
ಶಿರಾಳಕೊಪ್ಪ:14/11/2025 ಲಯನ್ಸ್ ಕ್ಲಬ್ ಶಿರಾಳಕೊಪ್ಪ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಸ್ವಾಮಿ ವಿವೇಕಾನಂದ ಶಾಲೆ, ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತುವಿಶ್ವ ಮಧುಮೇಹ ದಿನಾಚರಣೆಯನ್ನು ವಿಶೇಷ ವಾಗಿ ಆಚರಿಸಲಾಯಿತು. ಮಕ್ಕಳೇ ಜಾಗೃತಿ ರಾಯಭಾರಿಗಳಾಗಿ ವಾಕಥಾನ್ ಮೂಲಕ ಮಧುಮೇಹ ಅರಿವು ಮೂಡಿಸುವ ಘೋಷಣೆಯೊಂದಿಗೆ ಬಿತ್ತಿ ಪತ್ರ ವಿತರಿಸಿ ವಿಶಿಷ್ಟ ವಾಗಿ ಎರಡೂ ದಿನಾಚರಣೆಗಳನ್ನು ವಿನೂತನ ವಾಗಿ ಆಚರಿಸಿದರು. ವಾಕಥಾನ್ ನಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಲಯನ್ಸ್ ಕ್ಲಬ್ ಸದಸ್ಯರು, ಶಂಕರ ಕಣ್ಣಿನ ಆಸ್ಪತ್ರೆ…
ಮಕ್ಕಳ ದಿನಾಚರಣೆದಂದು ಮಕ್ಕಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ಶಿರಾಳಕೊಪ್ಪ:14/11/2025 ಪಟ್ಟಣದ ಅಸ್-ಸುಫಾ ಪಬ್ಲಿಕ್ ಶಾಲೆಯ ಮಕ್ಕಳು ಇಂದು ಮಕ್ಕಳ ದಿನಾಚರಣೆ ಅಂಗವಾಗಿ ಪ್ರಾಥಮಿಕ ಸಮುದಾಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲು ನೀಡಿ “ಮಕ್ಕಳ ದಿನ” ಆಚರಣೆ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಇಮ್ರಾನ್ ಮಾತನಾಡಿ ಈ ದಿನ ನಮ್ಮ ಶಾಲೆಯ ಮಕ್ಕಳು ತಮ್ಮ ಇಚ್ಛೆ ಮತ್ತು ಸ್ವಂತ ಖರ್ಚಿನಿಂದ ರೋಗಿ ಗಳಿಗೆ ಹಣ್ಣು ಹಂಪಲು ನೀಡಿದ್ದು ಖುಷಿ ತಂದಿದೆ. ಸಮಾಜದಲ್ಲಿನ ಆಗು ಹೋಗು ಮತ್ತು ಬಡವರ, ನಿರ್ಗತಿಕರ ಮತ್ತು ರೋಗಿಗಳ ಬಗ್ಗೆ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ…
ಶಿರಾಳಕೊಪ್ಪದಲ್ಲಿ ಸೌಹಾರ್ದ ಇಫ್ತಾರ್ ಕೂಟ..
ಶಿರಾಳಕೊಪ್ಪ:22/03/2025 ರಾಜ್ಯದಾದ್ಯಂತ ಬೀದರ್ ನಿಂದ ಮೈಸೂರು ವರೆಗೂ ಸೌಹಾರ್ದ ಇಫ್ತಾರ್ ಕೂಟ ನಡೆಸುವ ಮೂಲಕ ಮಾನವ ಸಂಭಂದ ಗಳನ್ನು ಬೆಸುಗೆ ಹಾಕುವ ಕೆಲಸ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ ಮಾಡುತ್ತಿದೆ ಎಂದು ರಾಜ್ಯ ಇಸ್ಲಾಮಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಜನಾಬ್ ರಿಯಾಜ್ ಅಹ್ಮದ್ ರೋಣ ಹೇಳಿದರು. ಪಟ್ಟಣದ ಹಜರತ್ ಉಮರ್ ಫಾರೂಖ್ ಮಸೀದಿಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರುನಾವು ಉಪಕಾರ ಮನೋಭಾವನೆಯನ್ನು ಹೊಂದುವ…
ಶಿರಾಳಕೊಪ್ಪದ ಲಂಗಡೆ (ಕಾಲು ಹೀನ) ಮೌಜಿನ್ ಸಾಬ್ ಇನ್ನಿಲ್ಲ……
ಶಿರಾಳಕೊಪ್ಪ:25-01-2025 ಪಟ್ಟಣದ ಮುಸ್ಲಿಂ ಸಮುದಾಯದಲ್ಲಿ ಲಂಗಡೆ ಮೌಜಿನ್ ಸಾಬ್ ಎಂದೇ ಸುಪ್ರಸಿದ್ದಿ ಪಡೆದಿದ್ದ ಊರಿನ ಜಾಮೀಯಾ ಮಸೀದಿಯ ಮೌಜಿನ್ (ಮಸೀದಿಯ ಆರೈಕೆ ಮಾಡುವವ) ಶ್ರೀ ಸಾಬ್ಜಾನ್ ಸಾಬ್ ರವರು ದಿನಾಂಕ 22/1/2025 ಬುಧವಾರ ದಂದು ತೀರಿಕೊಂಡಿದ್ದು ಶಿಕಾರಿಪುರ ತಾಲ್ಲೂಕಿನಾದ್ಯಂತ ಮೃತರ ಅನೇಕ ಮಂದಿ ಅಭಿಮಾನಿಗಳಿಗೆ ಘಾಸಿ ಉಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಸಾಬ್ಜಾನ್ ಸಾಹೇಬರು ಸುಮಾರು 45 ವರ್ಷ ಪಟ್ಟಣದ ಜಾಮೀಯಾ ಮಸೀದಿಯ ಆರೈಕೆ ಮತ್ತು ಧರ್ಮ ಕಾರ್ಯ ಮಾಡಿದ್ದು…
ಕರಾಟೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ಕೀರ್ತಿ ತಂದ ಶ್ರೀಧರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು….
ಶಿರಾಳಕೊಪ್ಪ:07/01/2025 ದಿನಾಂಕ 5/01/2025 ಭಾನುವಾರದಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಆಲ್ ಇಂಡಿಯಾ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ – 2025 ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ನಡೆದಂತಹ ಕ್ರೀಡಾಕೂಟದಲ್ಲಿ ಏಕಲವ್ಯ ಕರಾಟೆ ಕ್ಲಬ್ ನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದು ಕೀರ್ತಿಯನ್ನು ತಂದಿರುತ್ತಾರೆ. ಹತ್ತಿರದ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಭಗತ್ ಎಂಎಸ್ . ಸಾಯೀಮ್ ಶುಂಠಿ, ಉದಯ .ಅವನೀಶ್ ವೇದಾಂತ್…
ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪುರಸಭೆಗೆ ಸಾರ್ವಜನಿಕರಿಂದ ಮನವಿ…
ಶಿರಾಳಕೊಪ್ಪ:06/01/2024 ಪಟ್ಟಣದಲ್ಲಿ ಅಭಿವೃದ್ಧಿ ಆಗದೆ ಇರುವ ಕೆಲ ಪ್ರದೇಶಗಳಿಗೆ ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಹಣ ಮೀಸಲಿಡಿಸಿ ಕಾಮಗಾರಿಗಳನ್ನು ಮಾಡುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಪುರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಪಟ್ಟಣದ ಅನೇಕ ಪ್ರದೇಶಗಳು ಅಭಿವೃದ್ಧಿ ವಂಚಿತವಾಗಿರುವುದನ್ನು ಪ್ರಸ್ತಾಪ ಮಾಡಿ ಮನವಿ ಸಲ್ಲಿಸಿದ ಸ್ಥಳೀಯ ನಾಗರೀಕರು ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳು ಮಾಡುವಂತೆ ಬೇಡಿಕೆ ಇಟ್ಟರು. ಈ ಸಂಧರ್ಭದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಅಬ್ದುಲ್ ನವೀದ್ ಪಟ್ಟಣದಲ್ಲಿ ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯ…
ಸರಕಾರಿ ಆಸ್ಪತ್ರೆಯ ತೆರೆದ ತೊಟ್ಟಿಯಲ್ಲಿ ಮಗು ಬಿದ್ದು ಸಾವು……ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ಬಿ ವೈ ಆರ್.
ಶಿಕಾರಿಪುರ:16-11-2024 ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಆಯಾನ್ ಆಟ ಆಡುತ್ತ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಗೆ ಬಳಸಲು ನೀರು ಸಂಗ್ರಹಣೆ ಮಾಡುವ ಉದ್ದೇಶದಿಂದ ತೊಟ್ಟಿ ನಿರ್ಮಾಣ ಮಾಡಲಾಗಿದೆ. ಶುಕ್ರವಾರ ಪೋಷಕರೊಂದಿಗೆ ಸಂಭಂದಿ ರೋಗಿಯನ್ನು ನೋಡಲು ಬಂದ ಆಯಾನ್ ಆಟ ಆಡುತ್ತ ಕಾಮಗಾರಿ ಪ್ರದೇಶದಲ್ಲಿರುವ ತೊಟ್ಟಿ ಹತ್ತಿರ ಹೋಗಿ ಬಿದ್ದಿರುವುದಾಗಿ ಮಾಹಿತಿ ಲಭ್ಯ ವಾಗಿದೆ. ಸಂಸದರ ಭೇಟಿ: ತಾಲ್ಲೂಕಿನ ಮತ್ತಿ…
ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ – ಕುಂಸಿ ಪೊಲೀಸ್!
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ಯಾರೋ ಒಬ್ಬ ವ್ಯಕ್ತಿಯು ಮಾದಕ
- 1
- 2

