The Siasat News - Images

ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ತಡಗಣಿ ಮಂಜುನಾಥ್…

ಶಿರಾಳಕೊಪ್ಪ:10/1/2026 ಯುವಕರು ಕ್ರೀಡೆಯನ್ನು ಕೇವಲ ಮನರಂಜನೆಯಾಗಿ ನೋಡದೇ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಅವಶ್ಯಕವಾದ ಶಿಸ್ತಿನ ಸಾಧನವಾಗಿ ಬಳಸಿಕೊಳ್ಳಬೇಕು. ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುರಸಭೆಯ ಮಾಜಿ ಸದಸ್ಯ ತಡಗಣಿ ಮಂಜುನಾಥ್ ಹೇಳಿದರು. ತಡಗಣಿ ಗ್ರಾಮದಲ್ಲಿ ಆಯೋಜಿಸಿದ್ದ ತಡಗಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಯುವಕರಲ್ಲಿ ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದರೆ ಆಟದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು….

Read More
The Siasat News - Images

ಶಿರಾಳಕೊಪ್ಪ ಪೊಲೀಸ್ ಠಾಣಿ ವತಿಯಿಂದ ರಕ್ತದಾನ ಶಿಬಿರ….

ಶಿರಾಳಕೊಪ್ಪ:10/1/2025. ಪೊಲೀಸ್ ಠಾಣಿ ಶಿರಾಳಕೊಪ್ಪ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿರಾಳಕೊಪ್ಪ ಪೊಲೀಸ್ ಠಾಣೆ ಅವರಣದಲ್ಲಿ ಇಂದು ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಸುಮಾರು 65ಕ್ಕಿಂತ ಹೆಚ್ಚು ಜನ ರಕ್ತದಾನಿಗಳು ರಕ್ತ ದಾನ ಮಾಡಿದರು. ಈ ಸಂದರ್ಭದಲ್ಲಿ 55ಬಾರಿ ರಕ್ತದಾನ ಮಾಡಿದ ಸಿವಿಲ್ ಹೆಡ್ ಕಾನ್ಸ್ಟೇಬಲ್ ರಕ್ತ ಸೈನಿಕ ಹಾಲೇಶಪ್ಪ ಮಾತನಾಡಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಡೆಯುತ್ತಿರುವ ರಕ್ತದಾನ ಶಿಬಿರ ಗಳ ಪೈಕಿ 80ನೇ…

Read More
The Siasat News - Images

ಶಿರಾಳಕೊಪ್ಪ ಸವಿತಾ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ….

ಶಿರಾಳಕೊಪ್ಪ :17/12/2025. ಪಟ್ಟಣದ ಸವಿತಾ ಸಮಾಜ ವತಿಯಿಂದ ಸಮಾಜದ ಬೆಳ್ಳಿ ಹಬ್ಬದ ಸವಿ ನೆನಪಿನ ಅಂಗವಾಗಿ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಯಿತು. ರಿಪ್ಪನ್ ಪೇಟೆಯ ಸವಿತಾ ಸಮಾಜ ಪ್ರಥಮ, ಮಾವಲಿ ಯ ಓಲಂಪಿಕ್ ಬಾಯ್ಸ್ ದ್ವಿತೀಯ ಹಾಗೂ ಜೀರಿಗೆ ಮನೆ ಸವಿತಾ ಸಮಾಜದ ಹುಡುಗರು ತೃತೀಯ ಬಹುಮಾನ ಗಳಿಸಿದರು.. ಪಂದ್ಯಾವಳಿ ಪೂರ್ವದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿರಾಳಕೊಪ್ಪ ಸವಿತಾ ಸಮಾಜದ ಅಧ್ಯಕ್ಷರಾದ ನಾಗರಾಜ್ ಭಂಡಾರಿ, ಆರಕ್ಷಕ ಠಾಣಾಧಿಕಾರಿ ಪ್ರಶಾಂತ್ ಕುಮಾರ್, ಪ್ರಗತಿಪರ ರೈತ…

Read More
The Siasat News - Images

ವಿಜ್ಞಾನ ವಿಷಯವಾಗಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ- ಶ್ರೀಮತಿ ಮಮತಾ ಸಾಲಿ…

ಶಿರಾಳಕೊಪ್ಪ:17/12/2025. ಪಟ್ಟಣದ ಮೌಲಾನ ಆಜಾದ್ ಮಾದರಿ ಶಾಲೆಯ ಮಕ್ಕಳ ವತಿ ಯಿಂದ ನಡೆದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಶ್ರೀ ಮತಿ ಮಮತಾ ಸಾಲಿ ಮಕ್ಕಳ ಜ್ಞಾನ ವೃದ್ಧಿಗೆ ಪ್ರದರ್ಶನಗಳು ಪೂರಕವಾಗಿವೆ. ಅವರಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುತ್ತದೆ. ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗುತ್ತದೆ. ವಿಜ್ಞಾನ ಎಂದರೆ ಒಂದು ಸಂಜೀವಿನಿಯಂತೆ ಬದುಕಿನಲ್ಲಿ ನಮಗೆ ಜ್ಞಾನ ಹಾಗೂ ಸರಿಯಾದ ಪ್ರಜ್ಞೆ ಬರಬೇಕೆಂದರೆ ವಿಜ್ಞಾನದ…

Read More
The Siasat News - Images

ಸರಕಾರಿ ಆಸ್ಪತ್ರೆಯ ತೆರೆದ ತೊಟ್ಟಿಯಲ್ಲಿ ಮಗು ಬಿದ್ದು ಸಾವು……ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ಬಿ ವೈ ಆರ್.

ಶಿಕಾರಿಪುರ:16-11-2024 ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಆಯಾನ್ ಆಟ ಆಡುತ್ತ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಗೆ ಬಳಸಲು ನೀರು ಸಂಗ್ರಹಣೆ ಮಾಡುವ ಉದ್ದೇಶದಿಂದ ತೊಟ್ಟಿ ನಿರ್ಮಾಣ ಮಾಡಲಾಗಿದೆ. ಶುಕ್ರವಾರ ಪೋಷಕರೊಂದಿಗೆ ಸಂಭಂದಿ ರೋಗಿಯನ್ನು ನೋಡಲು ಬಂದ ಆಯಾನ್ ಆಟ ಆಡುತ್ತ ಕಾಮಗಾರಿ ಪ್ರದೇಶದಲ್ಲಿರುವ ತೊಟ್ಟಿ ಹತ್ತಿರ ಹೋಗಿ ಬಿದ್ದಿರುವುದಾಗಿ ಮಾಹಿತಿ ಲಭ್ಯ ವಾಗಿದೆ. ಸಂಸದರ ಭೇಟಿ: ತಾಲ್ಲೂಕಿನ ಮತ್ತಿ…

Read More
The Siasat News - Images

ಅಮ್ಮನಕೇರಿ: ಕಬ್ಬಡ್ಡಿ ಪಂದ್ಯಾವಳಿ, ಕಕ್ಕುಪ್ಪಿ ತಂಡ ಪ್ರಥಮ……

ವಿಜಯನಗರ:02-11-2024 ಜಿಲ್ಲೆಯ ಕೊಡ್ಲಿಗಿ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮನಕೇರಿ ಗ್ರಾಮದಲ್ಲಿ ನವಂಬರ್ 2 ಶನಿವಾರದಂದು ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮದ ವಿವಿದ ಸಂಘಟನೆಗಳ ಸಹಯೋಗದಲ್ಲಿ, ಯುವಕರಿಗಾಗಿ ಕಬಡ್ಡಿ ಪಂದ್ಯಾವಳಿ ಜರುಗಿಸಲಾಯಿತು. ಪಂದ್ಯಾವಳಿಯಲ್ಲಿ ಕಕ್ಕುಪ್ಪಿಯ ಯುವಕರ ತಂಡ ಪ್ರಥಮ ಸ್ಥಾನ ಪಡೆಯಿತು, ದ್ವಿತೀಯ ಬಹುಮಾನ ಅಮ್ಮನ ಕೇರಿಯ ಭಗತ್ ಸಿಂಗ್ ಬಾಯ್ಸ್ ತಂಡ ಪಡೆದುಕೊಂಡಿತು. ಪಂದ್ಯಾವಳಿಗೆ ಪ್ರಥಮ ಬಹುಮಾನದ ಟ್ರೋಪಿಯನ್ನು, ಸಿಜಿ ಮಂಜುನಾಥ್ ಗೌಡ ರವರು ಕೊಡುಗೆಯಾಗಿ ನೀಡಿರುತ್ತಾರೆ. ದ್ವಿತೀಯ ಬಹುಮಾನವನ್ನು, ಶಿಕ್ಷಕರಾದ ಮಂಜುನಾಥ ಸ್ವಾಮಿ…

Read More
The Siasat News - Images

ಹೊನಲುಬೆಳಕಿನ ವಾಲಿಬಾಲ್ ಪಂದ್ಯಾವಳಿ…..

ಶಿರಾಳಕೊಪ್ಪ:29-10-2024 ಪಟ್ಟಣದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಾನುವಾರ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಯೂಥ್ ಕ್ಲಬ್ ವತಿಯಿಂದ ನಡೆಸಲಾಯಿತು. ಪಂದ್ಯಾವಳಿಗೆ ಶಿಕಾರಿಪುರ ತಾಲೂಕು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟಾ ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. ಮನುಷ್ಯ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಮಾನಸಿಕ ಮತ್ತು ದೈಹಿಕ ಸಾಧನೆ ಮುಖ್ಯ. ಈ ಕಪ್ಯೂಟರ್ ಮತ್ತು ಮೊಬೈಲ್ ಯುಗದಲ್ಲಿ ಕ್ರೀಡೆ ಎನ್ನುವುದು ಮಾಯವಾಗಿದೆ. ಇಂತಹ ಸಂದರ್ಭದಲ್ಲಿ ಯೂಥ್ ಕ್ಲಬ್ ನಂತಹ ಸಂಘಟನೆಯ ಯುವಕರು…

Read More