ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ತಡಗಣಿ ಮಂಜುನಾಥ್…
ಶಿರಾಳಕೊಪ್ಪ:10/1/2026 ಯುವಕರು ಕ್ರೀಡೆಯನ್ನು ಕೇವಲ ಮನರಂಜನೆಯಾಗಿ ನೋಡದೇ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಅವಶ್ಯಕವಾದ ಶಿಸ್ತಿನ ಸಾಧನವಾಗಿ ಬಳಸಿಕೊಳ್ಳಬೇಕು. ಆರೋಗ್ಯವಂತ ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುರಸಭೆಯ ಮಾಜಿ ಸದಸ್ಯ ತಡಗಣಿ ಮಂಜುನಾಥ್ ಹೇಳಿದರು. ತಡಗಣಿ ಗ್ರಾಮದಲ್ಲಿ ಆಯೋಜಿಸಿದ್ದ ತಡಗಣಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಯುವಕರಲ್ಲಿ ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದರೆ ಆಟದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು….

