The Siasat News - Images

ಶಿಕಾರಿಪುರ ತಾll ಅಡಿಕೆ ಅಭಿವೃದ್ಧಿ ಪರಿಷ್ಕರಣೆ ಮತ್ತು ಮಾರಾಟ ಸಂಘದ ಅಧ್ಯಕ್ಷರಾಗಿ ಬಿ. ಸಿದ್ದಪ್ಪ ಆಯ್ಕೆ…. ಸಂಸದರಿಂದ ಸನ್ಮಾನ.

ಶಿಕಾರಿಪುರ:9-1-2024 ತಾಲ್ಲೂಕು ಅಡಿಕೆ ಅಭಿವೃದ್ಧಿ ಪರಿಷ್ಕರಣೆ ಮತ್ತು ಮಾರಾಟ ಸಹಕಾರ ಸಂಘ ನಿ,ದ ನೂತನ ಅಧ್ಯಕ್ಷರಾಗಿ ತಾಳಗುಂದ ದ ಬಿ. ಸಿದ್ದಪ್ಪ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ತಾಳಗುಂದ ಗ್ರಾಮದವರಾದ ಶ್ರೀಯುತರು ಮಾದರಿ ರೈತರಾಗಿ ಗುರುತಿಸಿಕೊಂಡಿದ್ದು. ನೂತನ ಅಧ್ಯಕ್ಷರಿಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ರವರು ಸನ್ಮಾನಿಸಿ ಪ್ರೋತ್ಸಾಹ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮಲೆನಾಡ ಅಭಿವೃದ್ಧಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ, ತಾಲ್ಲೂಕು ಬಿ ಜೆ ಪಿ ಕಾರ್ಯದರ್ಶಿ ಸತೀಶ್ ತಾಳಗುಂದ, ಸುಧೀರ ಮಾರವಳ್ಳಿ ಮತ್ತಿತರನ್ನು…

Read More

ನಟಿ ರಚಿತಾ ರಾಮ್ ಮೊದಲಸಂಭಾವನೆ ರಿವೀಲ್, ಡಿಂಪಲ್ಕ್ವೀನ್ ಎಷ್ಟೆಲ್ಲ ಕಷ್ಟ ಪಟ್ಟಿದ್ರು ?

ಸ್ಯಾಂಡಲ್‌ವುಡ್ಡಿಂಪಲ್ ಪಲ್ ಕ್ವೀನ್ ರಚಿತಾರಾಮ್ ಅವರು ಸದ್ಯಕನ್ನಡದ ಟಾಪ್ ನಟಿಯರಲ್ಲಿ ಒಬ್ಬರು.ಅಲ್ಲದೆ ಅತಿ ಹೆಚ್ಚುಸಂಭಾವನೆಪಡೆಯುವನಟಿ ಕೂಡ. ಸದ್ಯ ರಚಿತಾರಾಮ್ ಅವರ ಸಂಭಾವನೆಯು ಕೋಟಿಕ್ಲಬ್‌ನಲ್ಲಿದೆ. ಆದರೆ ಅವರ ಮೊದಲಸಂಭಾವನೆ ಎಷ್ಟು ಎನ್ನುವ ಅಚ್ಚರಿ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿರಚಿತಾ ರಾಮ್ ಅವರು ತಮ್ಮ ಸಿನಿಜರ್ನಿಯ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂಗೊತ್ತಿರುವಂತೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ನಟದರ್ಶನ್ ಸಾರ್ ಎಂದು ನೆನೆದಿದ್ದಾರೆ. ಪ್ರತಿದಿನ ಮೇಕಪ್ ಹಚ್ಚಿದಾಗಲೆಲ್ಲ ನಾನು ದರ್ಶನ್ ಸಾರ್ ಅವರನ್ನು ನೆನೆಯುತ್ತೇನೆ. ದರ್ಶನ್ ಸಾರ್ಧ…

Read More
The Siasat News - Images

ಕರಾಟೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ಕೀರ್ತಿ ತಂದ ಶ್ರೀಧರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು….

ಶಿರಾಳಕೊಪ್ಪ:07/01/2025 ದಿನಾಂಕ 5/01/2025 ಭಾನುವಾರದಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಆಲ್ ಇಂಡಿಯಾ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ – 2025 ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ನಡೆದಂತಹ ಕ್ರೀಡಾಕೂಟದಲ್ಲಿ ಏಕಲವ್ಯ ಕರಾಟೆ ಕ್ಲಬ್ ನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದು ಕೀರ್ತಿಯನ್ನು ತಂದಿರುತ್ತಾರೆ. ಹತ್ತಿರದ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಭಗತ್ ಎಂಎಸ್ . ಸಾಯೀಮ್ ಶುಂಠಿ, ಉದಯ .ಅವನೀಶ್ ವೇದಾಂತ್…

Read More
The Siasat News - Images

ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪುರಸಭೆಗೆ ಸಾರ್ವಜನಿಕರಿಂದ ಮನವಿ…

ಶಿರಾಳಕೊಪ್ಪ:06/01/2024 ಪಟ್ಟಣದಲ್ಲಿ ಅಭಿವೃದ್ಧಿ ಆಗದೆ ಇರುವ ಕೆಲ ಪ್ರದೇಶಗಳಿಗೆ ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಹಣ ಮೀಸಲಿಡಿಸಿ ಕಾಮಗಾರಿಗಳನ್ನು ಮಾಡುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಪುರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಪಟ್ಟಣದ ಅನೇಕ ಪ್ರದೇಶಗಳು ಅಭಿವೃದ್ಧಿ ವಂಚಿತವಾಗಿರುವುದನ್ನು ಪ್ರಸ್ತಾಪ ಮಾಡಿ ಮನವಿ ಸಲ್ಲಿಸಿದ ಸ್ಥಳೀಯ ನಾಗರೀಕರು ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳು ಮಾಡುವಂತೆ ಬೇಡಿಕೆ ಇಟ್ಟರು. ಈ ಸಂಧರ್ಭದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಅಬ್ದುಲ್ ನವೀದ್ ಪಟ್ಟಣದಲ್ಲಿ ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯ…

Read More
The Siasat News - Images

ಹಳ್ಳ ಹಿಡಿದು ಹೋದ ಐ ಲವ್ ಶಿರಾಳಕೊಪ್ಪ ಪಾರ್ಕ್….ಪುರಸಭೆ ಬೇಜವಾಬ್ದಾರಿತನ…. ಜನರಲ್ಲಿ ಆಕ್ರೋಶ.

ಶಿರಾಳಕೊಪ್ಪ:04/01/2025. ಪಟ್ಟಣದ ಬಸ್ಟ್ಯಾಂಡ್ ಸರ್ಕಲ್ ಹತ್ತಿರವಿರುವ ಪುರಸಭೆ ವ್ಯಾಪ್ತಿಗೆ ಒಳಪಟ್ಟ ವಾಣಿಜ್ಯ ಮಳಿಗೆಗಳ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ 2022-23 ನೇ ಸಾಲಿನಲ್ಲಿ ನಿರ್ಮಾಣವಾಗಿದ್ದ ಮಿನಿ ಪಾರ್ಕ್ ತಯಾರಾದ ಕೇವಲ 2ವರ್ಷಗಳ ಅವಧಿಯೊಳಗೆ ಹಾಳಾಗಿ ಹೋಗಿದ್ದು ಸ್ಥಳೀಯರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದ ಸೌಂದರ್ಯಕ್ಕೆ ಮೆರಗು ನೀಡುವಂತೆ ನಿರ್ಮಾಣ ಮಾಡಲಾಗಿದ್ದ ಮಿನಿ ಪಾರ್ಕ್ ಜನರನ್ನು ಆಕರ್ಷಸುತ್ತಿದ್ದು ಮಹಿಳೆಯರು ಮಕ್ಕಳು ಮತ್ತು ಹೊಸದಾಗಿ ಪಟ್ಟಣಕ್ಕೆ ಬಂದಂತಹ ಪ್ರವಾಸಿಗರು ತುಸು ಹೊತ್ತು ಅಲ್ಲಿ ನಿಂತು ಸೆಲ್ಫಿ ಮತ್ತು ಫೋಟೋಗಳನ್ನು ತೆಗೆದುಕೊಂಡು ಮುಂದೆ…

Read More
The Siasat News - Images

ಆಗಲಿದ ಮಾಜಿ ಪ್ರಧಾನಿಗಳಿಗೆ ಯೂಥ್ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ…

ಶಿರಾಳಕೊಪ್ಪ: ಭಾರತ ಮಾಜಿ ಪ್ರಧಾನ ಮಂತ್ರಿ ಡಾಕ್ಟರ್ ಮನಮೋಹನ್ ಸಿಂಗ್ ರವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ಸ್ಟಾಂಡ್ ಸರ್ಕಲ್‌ನಲ್ಲಿ ಯೂಥ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಡಾಕ್ಟರ್ ಮನಮೋಹನ್ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತುಸು ಹೊತ್ತು ಮೌನಾಚರಣೆ ಮಾಡುವ ಮೂಲಕ ಮೃತ ಸಾಧಕನಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನ ಯುವ ಮುಖಂಡ, ಇರ್ಫಾನ್ ಮುಹೀಬ್ ಸಾಬ್ ದೇಶವು ಆರ್ಥಿಕ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ತಮ್ಮ ಬುದ್ಧಿವಂತಿಗೆ ಮತ್ತು…

Read More
The Siasat News - Images

ಅಂಬೇಡ್ಕರ್ ಮಾನವರೋಪದ ಪ್ರತ್ಯಕ್ಷ ದೇವರು-ಕಾಗಿನೆಲೆ ರಂಗಪ್ಪ….

ಶಿಕಾರಿಪುರ: 20-12-2024 ರಾಮ-ಕೃಷ್ಣ ನಿಮಗೆ ಕಾರಣದ ದೇವರಾದರೆ ಅಂಬೇಡ್ಕರ್ ನಮಗೆ ಪ್ರತ್ಯಕ್ಷ ಮಾನವ ರೂಪದ ದೇವರು ಅವರ ದೂರದೃಷ್ಠಿ ಪ್ರತಿಫಲ ನಾವಿಂದು ಎಲ್ಲ ಸೌಲಭ್ಯ ಅನುಭವಿಸುತ್ತಿದ್ದೇವೆ ಎಂದು ತಾಲೂಕು ಅಹಿಂದ ಒಕ್ಕೂಟದ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು ಅವರು ದೇಶದ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯೇ ಅಂಬೇಡ್ಕರ್ ಕುರಿತು ಅವಹೇಳನ ಮಾತನ್ನಾಡುವ ಮೂಲಕ ಅವರ ಮನಸ್ಸಿನ ಕನ್ನಡಿ ಜನರೆದುರು ತೆರೆದಿಟ್ಟಿದ್ದಾರೆ ಅಂತಹವರ ಕುರಿತು ಜನತೆ ಎಚ್ಚರಿಕೆಯಿಂದ ಇರಬೇಕು ಎಂದರು. ಡಿಎಸ್‌ಎಸ್ ನ…

Read More
The Siasat News - Images

ಕನ್ನಡದ ಮೂಲ ನೆಲೆಯಲ್ಲಿ ಕನ್ನಡ ಮಾಯ… ಕೆನರಾ ಬ್ಯಾಂಕಿನಲ್ಲಿ ಮಲಯಾಳಿ ಚೆಕ್ ವಿತರಣೆ.

ಶಿರಾಳಕೊಪ್ಪ:20-12-2024 ಇಲ್ಲಿನ ಕೆನರಾ ಬ್ಯಾಂಕ್ ನಲ್ಲಿ ದಿನ ನಿತ್ಯ ಹಣ ಬಿಡುಗಡೆ ಮಾಡಿಕೊಳ್ಳಲು ಉಪಯೋಗಿಸುವ ಚೆಕ್ ಹಾಳೆ ಗಳು ಆಂಗ್ಲ ಮತ್ತು ಮಲಿಯಾಳಿ ಭಾಷೆಗಳಲ್ಲಿ ವಿತರಣೆ ಮಾಡಲಾಗುತ್ತಿದ್ದು ಗ್ರಾಹಕರಿಗೆ ತೊಂದರೆ ಉಂಟು ಮಾಡಿದೆ. ಕನ್ನಡದ ಮೊದಲ ದೊರೆ, ಕನ್ನಡದ ಮೂಲ ನೆಲೆಯಲ್ಲಿ ಕನ್ನಡವನ್ನು ಮಾಯೆ ಮಾಡಿ ಇತರೆ ಭಾಷೆಗಳಿಗೆ ಬೆಂಬಲ ನೀಡುತ್ತಿರುವ ಬ್ಯಾಂಕ್ ಸಿಬ್ಬಂಧಿಗಳ ವರ್ತನೆ ಕನ್ನಡ ಪರ ಮನಸ್ಸುಗಳಿಗೆ ಘಾಸಿ ಉಂಟು ಮಾಡಿದೆ. ಕನ್ನಡ ನೆಲೆಯಲ್ಲೇ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಮ್ಯ ಅಪರಾಧವಾಗಿದ್ದು ಈ ಬಗ್ಗೆ…

Read More
The Siasat News - Images

ಬಜ್ಮೆ ಉಮ್ಮೀದ್ ಅದೀಬಿ ಶಿರಾಳಕೊಪ್ಪ ವತಿಯಿಂದ ರಾಷ್ಟ್ರೀಯ ಮಟ್ಟದ ಉರ್ದು ಕವಿ ಸಮ್ಮೇಳನ…

ಶಿರಾಳಕೊಪ್ಪ:11-12-2024 ಪಟ್ಟಣದ ಬಜ್ಮೆ ಉಮ್ಮೀದ್ ಅದೀಬಿ ಸಾಂಸ್ಕೃತಿಕ ಸಮಿತಿ ವತಿಯಿಂದ ಡಿಸೆಂಬರ್ 13 ಶುಕ್ರವಾರ ದಂದು ರಾತ್ರಿ 8:30 ಘಂಟೆ ಯಿಂದ ಇಲ್ಲಿನ ಟಿಪ್ಪು ಕಲ್ಯಾಣ ಮಂಟಪ ದಲ್ಲಿ ರಾಷ್ಟ್ರೀಯ ಮಟ್ಟದ ಉರ್ದು ಕವಿ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಮೊಹಮ್ಮದ್ ಅಯೂಬ್ ಕೆ. ಜಿ. ಎನ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಉರ್ದು ಕವಿ ಸಮ್ಮೇಳನ ನಡೆಯಲಿದ್ದು ಈ ಬಾರಿ ರಾಷ್ಟ್ರೀಯ ಮಟ್ಟದ ಉರ್ದು ಕವಿಗಳನ್ನು ಆಮಂತ್ರಿಸಲಾಗಿದೆ…

Read More
The Siasat News - Images

ವಿದ್ಯುತ್ ಲೈನ್ ತಗುಲಿ ಚಾಲಕ ಸಾವು…. ಮೆಸ್ಕಾಂ ಮೇಲೆ ಎಫ್ ಐ ಆರ್ ದಾಖಾಲು…..

ಶಿರಾಳಕೊಪ್ಪ: 7-12-2024 ಕ್ಯಾಂಟರ್ ಚಾಲನೆ ವೃತ್ತಿ ಮಾಡಿಕೊಂಡು ಮನೆಗೆ ಆಧಾರವಾಗಿದ್ದ ಯುವಕನೋರ್ವ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಪ್ರಾಣ ಚೆಲ್ಲಿರುವ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ (32) ಮೃತ ಪಟ್ಟ ಕ್ಯಾಂಟರ್ ಚಾಲಕ. ಬಳ್ಳಿಗಾವಿಯಿಂದ ಸುತ್ತಕೋಟೆ ಹೋಗುವ ಮಾರ್ಗದಲ್ಲಿ ಕ್ಯಾಂಟರ್ ನಲ್ಲಿ ಹುಲ್ಲು ತುಂಬಿಕೊಂಡು ಬರುವಾಗ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್ ಗೆ ತಗುಲಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಕ್ಯಾಂಟರ್ ಚಾಲಕ ಮೊಹಮ್ಮದ್ ಈಶಾಮ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ….

Read More